ಒಂದನೆಯ ನರಸಿಂಹನ ಆಸ್ಥಾನದಲ್ಲಿದ್ದ [[ವೀರಶೈವ]] ಕವಿ [[ಹರಿಹರ]] , (ಹರೀಶ್ವರ ಎಂದೂ ಕರೆಯುವುದುಂಟು ) ಹಳೆಯ [[ಜೈನ]] ಚಂಪೂ ಶೈಲಿಯಲ್ಲಿ ಗಿರಿಜಾಕಲ್ಯಾಣ ಕೃತಿಯನ್ನು ರಚಿಸಿದನು. ಹತ್ತು ಭಾಗಗಳಿರುವ ಇದರ ಕಥಾವಸ್ತು ಶಿವ ಪಾರ್ವತಿಯರ ಪರಿಣಯ. [[ವಚನ ಸಾಹಿತ್ಯ]] ಪರಂಪರೆಯ ಭಾಗವಾಗಿರದಿದ್ದ ಮೊದಮೊದಲ [[ವೀರಶೈವ]] ಕವಿಗಳಲ್ಲಿ ಇವನೂ ಒಬ್ಬ. [[ಹಳೇಬೀಡು|ಹಳೇಬೀಡಿನ]] ಕರಣಿಕರ ಕುಟುಂಬದಿಂದ ಬಂದ ಹರಿಹರನು [[ಹಂಪೆ|ಹಂಪೆಯಲ್ಲಿ]] ಅನೇಕ ವರ್ಷಗಳನ್ನು ಕಳೆದು , ನೂರಕ್ಕೂ ಹೆಚ್ಚು ರಗಳೆಗಳನ್ನು ರಚಿಸಿದನು. ಇವು ವಿರೂಪಾಕ್ಷ ದೇವರ ಗುಣಗಾನ ಮಾಡುವ ರಗಳೆಗಳಾಗಿವೆ. [[ರಾಘವಾಂಕ]] ತನ್ನ ಹರಿಶ್ಚಂದ್ರ ಕಾವ್ಯದ ಮೂಲಕ [[ಷಟ್ಪದಿ|ಷಟ್ಪದಿಯ]] ಬಳಕೆಯನ್ನು ಮೊಟ್ಟಮೊದಲ ಬಾರಿಗೆ ಮಾಡಿದ. [[ಕನ್ನಡ]] ವ್ಯಾಕರಣದ ನಿಯಮಗಳನ್ನು ಕೆಲವೊಮ್ಮೆ ಉಲ್ಲಂಘಿಸಿದ್ದರೂ, ಇದು ಕನ್ನಡ ಸಾಹಿತ್ಯದ ಅತಿಶ್ರೇಷ್ಟ ಕೃತಿಗಳಲ್ಲಿ ಒಂದೆಂದು ಪರಿಗಣಿಸಲ್ಪಡುತ್ತದೆ.
ಇನ್ನು ಸಂಸ್ಕೃತದಲ್ಲಿ , ಮಧ್ವಾಚಾರ್ಯರು , ಬ್ರಹ್ಮಸೂತ್ರಗಳಿಗೆ ಭಾಷ್ಯವನ್ನು ಬರೆದರು. ಇದಲ್ಲದೇ, ಇತರ ವೈದಿಕ ಶಾಖೆಗಳನ್ನು ಟೀಕಿಸುವ ವಿಮರ್ಶೆಗಳನ್ನೂ ಅವರು ಬರೆದರು. ತಮ್ಮ ತತ್ವಗಳಿಗೆ ಪ್ರಮಾಣಗ್ರಂಥಗಳಾಗಿ , ವೇದಗಳ ಬದಲಾಗಿ , ಪುರಾಣಗಳನ್ನು ಆರಿಸಿಕೊಂಡರು. ವಿದ್ಯಾತೀರ್ಥ ಬರೆದ ರುದ್ರಪ್ರಶ್ಣಾಭಾಷ್ಯವು ಆ ಕಾಲದ ಮತ್ತೊಂದು ಪ್ರಸಿದ್ಧ ಗ್ರಂಥ.